08/08/2026

ಬ್ರಹ್ಮಾವರ: ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣ-ತಲೆಮರೆಸಿಕೊಂಡಿದ್ದ ಆರೋಪಿ ಚೇತನ್ ಶೆಟ್ಟಿ ಅರೆಸ್ಟ್

0

ಬ್ರಹ್ಮಾವರ: ಇಲ್ಲಿನ ಸಾಯಿಬ್ರಕಟ್ಟೆಯ ಕಾಜ್ರಳ್ಳಿ ನಿವಾಸಿ ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿ ಪ್ರಿಯಕರ ಚೇತನ್ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ.ತಲೆ ಮರೆಸಿಕೊಂಡಿದ್ದ ಪ್ರಿಯಕರ ಚೇತನ್ ಶೆಟ್ಟಿಯನ್ನು ಬೆಂಗಳೂರಿನಿಂದ ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣದ ಜಾಡು ಹಿಡಿದ ಬ್ರಹ್ಮಾವರ ಪೊಲೀಸರು ಆರೋಪಿಯ ಪತ್ತೆಗೆ ಮುಂದಾಗಿದ್ದರು. ಈ ನಡುವೆ ಆರೋಪಿ ಮೈಸೂರಿನಲ್ಲಿದ್ದಾನೆ ಎನ್ನುವ ಮಾಹಿತಿ ಸಿಕ್ಕಿತ್ತು. ಈ ನಡುವೆ ಆತ ಬೆಂಗಳೂರಿಗೆ ಬಂದಿದ್ದ ಎನ್ನಲಾಗಿದ್ದು, ಅಲ್ಲಿಂದಲೇ ಪೊಲೀಸರು ಆತನನ್ನು ಸೆಪ್ಟಂಬರ್ 2ರ ರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ.

ಸೆಪ್ಟಂಬರ್ 3ರಂದು ಆತನನ್ನು ಬಹ್ಮಾವರಕ್ಕೆ ಕರೆ ತರಲಾಗಿದ್ದು, ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದೆ. ಇನ್ನು ಅನಿಶಾ ಹಾಗೂ ಚೇತನ್ ಶೆಟ್ಟಿ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು ಎನ್ನುವ ವಿಚಾರ ಕಾಲ್ ರೆಕಾರ್ಡ್ ಹಾಗೂ ಆಕೆ ಬರೆದಿಟ್ಟಿರುವ ಡೆತ್ ನೋಟ್ ಮೂಲಕ ಸಾಬೀತಾಗಿದೆ. ಕಳೆದ ಐದು ವರ್ಷಗಳಿಂದ ಇಬ್ಬರು ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಇದೀಗ ಅನಿಶಾ ಮದುವೆ ಪ್ರಸ್ತಾಪ ಎತ್ತಿದಾಗ ಆರೋಪಿ ಮನೆಯವರ ವಿರೋಧವಿದೆ ಎಂದು ತಪ್ಪಿಸಿಕೊಂಡಿದ್ದ. ಇದರಿಂದಾಗಿ ತೀವ್ರವಾಗಿ ನೊಂದುಕೊಂಡಿದ್ದ ಯುವತಿ ಯುವಕನಲ್ಲಿ ಹೇಳಿಕೊಂಡೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ನಡೆದ ಬಳಿಕ ದೈಜಿವರ್ಲ್ಡ್ ವಿಸ್ತೃತ ವರದಿ ಪ್ರಕಟಿಸಿತ್ತು. ಈ ನಡುವೆ ಪಾರದರ್ಶಕ ತನಿಖೆಗೆ ಬಿಲ್ಲವ ಯುವ ವೇದಿಕೆ ಒತ್ತಾಯಿಸಿತ್ತು. ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

 


Leave a Reply

Your email address will not be published. Required fields are marked *

You may have missed