TOP STORIES:

ಕೋಟಿ ಚೆನ್ನಯರು ನಡೆದಾಡಿದ ಪ್ರತಿ ಜಾಗವೂ ಪವಿತ್ರ


ಕೆಲ ದಿನಗಳ ನಂತರ ಸಾಮಾಜಿಕ ಜಾಲತಾಣದಲ್ಲಿ ಬರೆಯಬೇಕೆನಿಸಿತು.ದಿನಾಂಕ 26.09.2021 ನೇ ಭಾನುವಾರ ಬೆಳ್ತಂಗಡಿಯಲ್ಲಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಮತ್ತು ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ನಡೆದ ಅಮರ್ ಬೊಳ್ಳಿಲು ವಿಚಾರ ಮಂಡನೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ವಿಚಾರಗಳನ್ನು ತಿಳಿಯಬೇಕು ಎಂಬ ಆಸಕ್ತಿಯಿಂದ ಭಾಗವಹಿಸಿದೆ.ಸಂಘಟಕರು ಸಮಯಕ್ಕೆ ಸರಿಯಾಗಿ ಕಾರ್ಯಕ್ರಮ ಪ್ರಾರಂಭಿಸಿದರು.ಚುಟುಕಾದ ಉದ್ಘಾಟನಾ ಕಾರ್ಯಕ್ರಮ ಮತ್ತು ನಮ್ಮ ಸಮುದಾಯದ ಕಳಕಳಿ ಮತ್ತು ಮನ ಮುಟ್ಟುವ ಮಾತುಗಳು ಮಾಜಿ ಶಾಸಕರಾದ ಕೆ ವಸಂತ ಬಂಗೇರ ರವರ ಉದ್ಘಾಟನಾ ಭಾಷಣದಲ್ಲಿ ಇತ್ತು ನಂತರ ನೇರವಾಗಿ ವಿಚಾರ ಮಂಡನೆ ಮತ್ತು ಸಂವಾದ ಕಡೇ ನಮ್ಮ ಗಮನ, ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ , ಬೈದ್ಯ ಶ್ರೀ ಉಡುಪಿಯ ಅಧ್ಯಕ್ಷರಾದ ಶ್ರೀ ದಾಮೋದರ ಕಲ್ಮಾಡಿ, ಸಾಹಿತಿಗಳಾದ ಚೆಲುವರಾಜ್ ಪೆರಂಪಳ್ಳಿ, ರಂಗಕರ್ಮಿ, ಸಾಹಿತಿ, ಪತ್ರಕರ್ತರಾದ ಪರಮಾನಂದ ಸಾಲ್ಯಾನ್ , ಕಾರ್ಯಕ್ರಮದ ಸಮನ್ವಯಕಾರು ರಾಣಿ ಅಬ್ಬಕ್ಕ ಜಾನಪದ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಪ್ರೊ.ಡಾ.ತುಕರಾಮ ಪೂಜಾರಿ.

ಕಾರ್ಯಕ್ರಮದಲ್ಲಿ ಮಂಡನೆ ಮತ್ತು ಸಂವಾದ ಉತ್ತಮ ರೀತಿಯಲ್ಲಿ ನಡೆಯಿತು. ಕಳೆದ ಬಾರಿ ಮಂಗಳೂರಿನಲ್ಲಿ ನಡೆದ ಈ ರೀತಿಯ ಸಂವಾದ ಕಾರ್ಯಕ್ರಮದಲ್ಲಿ ನಾನೂ ಒಬ್ಬ ಪ್ರೇಕ್ಷಕನಾಗಿ ಭಾಗವಹಿಸಿದ್ದೆ. ಆದರೆ ಅದು ಗೊಂದಲದ ಗೂಡಾಯಿತು ನನ್ನ ಮನಸ್ಸಿಗೆ ಅತೀವ ನೋವು ಕೂಡ ಆಯಿತು.ಈ ಕಾರ್ಯಕ್ರಮದಲ್ಲಿ ನನ್ನ ಮನಸ್ಸಿನ ಮೂಲೆಯಲ್ಲೊಂದು ಆಶಾಭಾವನೆ ಚಿಗುರೊಡೆಯಿತು.ಕೋಟಿ ಚೆನ್ನಯ್ಯ ರ ಕೆಲವೊಂದು ವಿಚಾರದಲ್ಲಿ ವ್ಯತ್ಯಾಸಗಳು ಇದ್ದ ಎರಡು ತಂಡಗಳ ಮುಖ್ಯಸ್ಥರು ಉಪಸ್ಥಿತರಿದ್ದದ್ದು ನನಗೆ ಖುಷಿ ನೀಡಿತು. ಅಂತಿಮವಾಗಿ ತಿಳಿದ ವಿಚಾರ ಇಷ್ಟೇ ವೀರ ಪುರುಷರ ವಿಚಾರದಲ್ಲಿ ಜನಸಾಮಾನ್ಯರಿಗೆ (ಭಕ್ತರಿಗೆ ) ಯಾವುದೇ ಗೊಂದಲ ಇಲ್ಲ, ಕೋಟಿ ಚೆನ್ನಯರು ನಡೆದಾಡಿದ ಪ್ರತಿ ಜಾಗವೂ ಪವಿತ್ರ ,ನಮ್ಮ ಸಮಾಜ ಈ ವಿಚಾರದ ದ್ವಂದ್ವದಿಂದ ಸಮಾಜದ ಒಗ್ಗಟ್ಟಿಗೆ ತುಂಬಾ ನಷ್ಟವಾಗಿದೆ.ಇನ್ನೂ ಮುಂದೆ ಈ ವಿಚಾರದಲ್ಲಿ ಗೊಂದಲವನ್ನು ಸೃಷ್ಟಿ ಮಾಡದೇ ನಮ್ಮ ಸಮಾಜ ಒಗ್ಗಟ್ಟಾಗಿ ಇರೋಣ, ಎಂಬ ಸಂದೇಶವು ಎರಡು ತಂಡಗಳಿಂದ ವ್ಯಕ್ತವಾಯಿತು.

ಎಸ್ ಆರ್ ಪ್ರವೀಣ್ 


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »