TOP STORIES:

ವಿಜಯನಗರ ಸಾಮ್ರಾಜ್ಯ ಸ್ಥಾಪನೆಯಲ್ಲಿ ಬಿಲ್ಲವರು: ಸಾಹಿತಿ ಸಂಶೋಧಕ ಬಾಬು ಶಿವ ಪೂಜಾರಿ


”ವಿಜಯನಗರ ಸ್ಥಾಪನೆಯಲ್ಲಿ ಬಿಲ್ಲವರಿದ್ದಾರೆ ಎಂಬುದಕ್ಕೆ ಎರಡು ವೀರಗಲ್ಲುಗಳು ಸಾಕ್ಷಿಯಾಗಿವೆ. ಮೇಲ್ವರ್ಗದವರು ಇತಿಹಾಸವನ್ನು ಹೇಗೆ ತಮಗೆ ತಕ್ಕಂತೆ ಬದಲಾವಣೆ ಮಾಡುತ್ತಾರೆ ಎಂಬುದಕ್ಕೆ ಉದಾಹರಣೆಯಾಗಿ ನಾನು ನನ್ನ ಮುಂಬರುವ ಪುಸ್ತಕದಲ್ಲಿ ದಾಖಲೆಗಳನ್ನು ಪ್ರಸ್ತುತಪಡಿಸಲಿದ್ದೇನೆ” ಎಂದು ಹಿರಿಯ ಸಾಹಿತಿ, ಸಂಶೋಧಕ ಬಾಬು ಶಿವ ಪೂಜಾರಿ ಹೇಳಿದ್ದಾರೆ.

ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಹಾಗೂ ವಿಶುಕುಮಾ‌ರ್ ದತ್ತಿನಿಧಿ ಸಮಿತಿ ವತಿಯಿಂದ ಹಾಗೂ ಯುವವಾಹಿನಿ ಪಣಂಬೂರು-ಕುಳಾಯಿ ಘಟಕದ ಆತಿಥ್ಯದಲ್ಲಿ ಉರ್ವಸ್ಟೋರ್‌ನ ತುಳುಭವನದಲ್ಲಿ ರವಿವಾರ ಜರುಗಿದ 2024ನೇ ಸಾಲಿನ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

“ವಿಜಯನಗರವನ್ನು ಸ್ಥಾಪನೆ ಮಾಡಿದವರಲ್ಲಿ ವಿದ್ಯಾರಣ್ಯರು ಪ್ರಮುಖರು ಎನ್ನಲಾಗುತ್ತದೆ. ನಾನು ಬರೆದ ವಿಜಯನಗರ ತುಳುವರು ಮತ್ತು ಬಿಲ್ಲವರ ಕುರಿತಾದ ಅಧ್ಯಯನ ಕೃತಿ ಮುಂದಿನ ಎರಡು ತಿಂಗಳಲ್ಲಿ ಪ್ರಕಟಗೊಳ್ಳಲಿದ್ದು, ಅದರಲ್ಲಿ ಒಂದು ಅಧ್ಯಾಯ ವಿದ್ಯಾರಣ್ಯರಿಗೆ ಮೀಸಲಿಟ್ಟಿದ್ದೇನೆ. ವಿಜಯನಗರ ಸ್ಥಾಪನೆಯಾಗಿದ್ದು 1336 ಎಪ್ರಿಲ್ 18ರ ಶುಕ್ರವಾರ. ಈ ಸಮಯದಲ್ಲಿ ವಿದ್ಯಾರಣ್ಯರ ಪ್ರಾಯ ಕೇವಲ 5 ವರ್ಷ. ಆ ಮಗು ಹೇಗೆ ರಾಜಗುರು ಆಗುತ್ತದೆ? ಹೇಗೆ ಸನ್ಯಾಸಿಯಾಗುತ್ತದೆ? ಎಂಬುದಕ್ಕೆ ಉತ್ತರ ಸಿಗಬೇಕಿದೆ. ಇತಿಹಾಸದಲ್ಲಿ ತಳವರ್ಗವನ್ನು ತಳಕ್ಕೆ ದೂಡಲಾಗುತ್ತದೆ ಎಂಬುದಕ್ಕೆ ಇದೊಂದು ಉದಾಹರಣೆ. ನಾವು ಯಾರನ್ನೂ ದೂಷಿಸುತ್ತಿಲ್ಲ. ಆದರೆ ತಳವರ್ಗದ ಇತಿ ಹಾಸವನ್ನು ಯಾಕೆ ಮುಚ್ಚಲಾಗುತ್ತದೆ ಎಂಬುದಕ್ಕೆ ಉತ್ತರ ಬೇಕಿದೆ” ಎಂದವರು ಹೇಳಿದರು.

ಸದ್ಯ ಸನಾತನ ಧರ್ಮದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಆದರೆ ದಾಸ ಪರಂಪರೆಯಲ್ಲಿ 222 ಮಂದಿ ದಾಸರ ಉಲ್ಲೇಖವಿದೆ ಆದರೆ ದಾಸ ಸಾಹಿತ್ಯದಲ್ಲಿ ಸೂಫಿ ಸಂತರಿಂದ ಮತ ಪರಿವರ್ತನೆ ಆಗಿದ್ದರ ಬಗ್ಗೆ ಯಾಕೆ ಯಾರೊಬ್ಬರೂ ಧ್ವನಿ ಎತ್ತಿಲ್ಲ? ಇಂದು ಯಾಕೆ ಮುಸ್ಲಿಮರ ವಿರುದ್ಧ ಧ್ವನಿ ಎತ್ತಲಾಗುತ್ತಿದೆ? ನಾನು ಸಾಕಷ್ಟು ದಾಸ ಪುಸ್ತಕಗಳ ಅಧ್ಯಯನ ನಡೆಸಿದ್ದೇನೆ. ನಮ್ಮ ತುಳು ಸಂಸ್ಕೃತಿ, ಸಭ್ಯತೆಯಲ್ಲಿ ಎಲ್ಲ ಜನಾಂಗದವರನ್ನು ಸೇರಿಸಿಕೊಂಡು ಒಟ್ಟಿಗೆ ಕೂಡಿ ಬಾಳಿದೆ ಇದು ನಾರಾಯಣಗುರುಗಳ ತತ್ವವಾಗಿದೆ ಎಂದು ಬಾಬು ಶಿವ ಪೂಜಾರಿ ವಿಶ್ಲೇಷಿಸಿದರು.

“ತುಳು ಭಾಷೆಯ ಲಿಪಿಯ ಬಗ್ಗೆ ಚರ್ಚಿತ ವಿಚಾರ. 14ನೇ ಶತಮಾನದಲ್ಲಿ ತುಳು ಲಿಪಿಯನ್ನು ತಮ್ಮ ಸಾಹಿತ್ಯದಲ್ಲಿ ಬಳಸಲಾಗಿದೆ ಎಂಬ ಉಲ್ಲೇಖ ಮಲಯಾಳಂ ಸಾಹಿತ್ಯದಲ್ಲಿದ್ದು ತುಳು ಲಿಪಿ ತುಳುವರದ್ದೇ ಎಂಬುದಕ್ಕೆ ಬೇರೆ ದಾಖಲೆ ಬೇಕಾಗಿಲ್ಲ. 2ನೇ ಶತಮಾನದ ತಮಿಳು ಸಾಹಿತ್ಯದಲ್ಲಿ ತುಳುವಿನ ಬಗ್ಗೆ ಉಲ್ಲೇಖವಿದೆ. 2010 ಮತ್ತು 12ರಲ್ಲಿ ಎರಡು ಬಾರಿ ತಮಿಳುನಾಡಿನ ಗ್ರಾಮಾಂತರ ಪ್ರದೇಶಕ್ಕೆ ಭೇಟಿ ನೀಡಿ ಅನೇಕ ತುಳು ಪೂರ್ವಿಕರನ್ನು ಭೇಟಿಯಾಗಿದ್ದೇನೆ ಹಾಗಾಗಿ ತುಳು ಪ್ರಾಚೀನ ಭಾಷೆ ಗ್ರೀಕ್‌ನಲ್ಲೂ ತುಳುವಿಗೆ ಸಂಬಂಧಿಸಿದ ವಿಚಾರವಿದೆ. ಕೆಲ ವರ್ಷಗಳ ಹಿಂದೆ ಗ್ರೀಕ್‌ನಿಂದ ಕೆಲವೊಂದು ವೀಡಿಯೊಗ್ರಫಿ ತರಿಸಿಕೊಂಡಿದ್ದು, ನೀರೆತ್ತುವ ರಾಟೆ, ನಮ್ಮಲ್ಲಿ ತೆಂಗಿನಮರಕ್ಕೆ ಕಟ್ಟುವ ಕಟ್ಟಿ ಅಲ್ಲಿ ಖರ್ಜೂರದ ಮರಕ್ಕೆ ಕಟ್ಟೆ ಕಟ್ಟುವ ತದ್ರೂಪವಿದೆ. ಆದರೆ ತುಳುನಾಡಿನಲ್ಲಿ ಸಿಗುವ ಎಲ್ಲಾ ಶಾಸನಗಳು ಕನ್ನಡದಲ್ಲಿವೆ. ಅದಕ್ಕೆ ಕಾರಣ ತುಳುನಾಡು ಒಂದು ಕಾಲದಲ್ಲಿ ಹಾಸನದವರೆಗೆ ಹಬ್ಬಿತ್ತು. ಅಲ್ಲಿ ಆದಿ ಬಿಲ್ಲೇಶ್ವರ ಎಂಬ ಬಿಲ್ಲವರ ಆದಿ ದೇವಸ್ಥಾನವಿದೆ” ಎಂದವರು ವಿವರಿಸಿದರು.

“ನನ್ನ ಹುಟ್ಟುಭಾಷೆ ಕುಂದಾಪುರ ಕನ್ನಡ, ಆದರೆ ಬಡತನ ಮುಂಬೈನ ಹೊರನಾಡಿಗೆ ಕಳುಹಿಸಿ ಅಲ್ಲಿನ ಭಾಷೆಯೊಂದಿಗೆ ಬೆರೆಯುವಂತೆ ಮಾಡಿತು. ದುಡಿಮೆಯ ಜತೆ ಕಲಿಕೆಯನ್ನು ಮುಂದುವರಿಸಿದ್ದ ನನಗೆ ಶಿಕ್ಷಣಕ್ಕೆ ನೆರವಾಗಿದ್ದು ಮುಂಬೈನಲ್ಲಿ ನಡೆಯುತ್ತಿದ್ದ ರಾತ್ರಿ ಶಾಲೆ ಅಲ್ಲಿದ್ದ ಬಹುತೇಕ ಉಪಾಧ್ಯಾಯರು ಉಚಿತವಾಗಿ ಶಿಕ್ಷಣ ನೀಡುತ್ತಿದ್ದ ಕಾರಣ ಶಿಕ್ಷಣದ ಜತೆಗೆ ನಾನು ಬರೆಯಲೂ ಕಾರಣವಾಯಿತು. ಅಂತಹ ಉಪಾಧ್ಯಾಯರಿಗೆ ನನಗೆ ಸಿಕ್ಕ ಗೌರವವನ್ನು ಅರ್ಪಿಸುತ್ತೇನೆ’ ಎಂದು ಬಾಬು ಶಿವ ಪೂಜಾರಿ ಹೇಳಿದರು.

ಈ ಸಂಧರ್ಭದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ, ಪದ್ಮರಾಜ್ ಆರ್ ಕುದ್ರೋಳಿ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್. ಧರ್ಮ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ ಪೂಜಾರಿ, ವಿಶುಕುಮಾರ್ ದತ್ತಿನಿಧಿ ಸಮಿತಿಯ ಸಂಚಾಲಕ ಸುರೇಶ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »