TOP STORIES:

ಕೇರಳದ ಕಾಸರಗೋಡಿನ ಬಿರುವೆರ್ ಕುಡ್ಲ (ರಿ)ಮಂಜೇಶ್ವರ ತಾಲೂಕು ತಂಡದ ವತಿಯಿಂದ 6 ನೆಯ ಸೇವಾಯೋಜನೆ


ತುಳುನಾಡಿನ ಹಲವಾರು ಬಡಕುಟುಂಬಗಳ ಕಣ್ಣೀರೊರಸಿ ಅವರ ನೇರವಿಗೆ ಕಾರಣವಾದ ಬಲಿಷ್ಠ ಹಾಗೂ ಪ್ರಸಿದ್ದಿ ಪಡೆದ ಸಂಘಟನೆ ಫ್ರೆಂಡ್ಸ್ ಬಲ್ಲಾಳ್ಬಾಗ್  ಬಿರುವೆರ್ ಕುಡ್ಲ ಇದರ ಸ್ಥಾಪಕಾಧ್ಯಕ್ಷರಾದ  ಶ್ರೀಯುತ ಉದಯ ಪೂಜಾರಿಯವರ ವ್ಯಕ್ತಿತ್ವ, ಮನುಷ್ಯತ್ವ ಹಾಗೂ ಸಮಾಜಮುಖಿ ಕೆಲಸಗಳ ಪ್ರೇರಣೆಯಿಂದ ಬಿರುವೆರ್ ಕುಡ್ಲ ಸಂಘಟನೆಯ ಅನೇಕ ಶಾಖೆಗಳು ಈಗ ತುಳುನಾಡಿನಾದ್ಯಾಂತ ಕವಲೊಡೆದು ಅಶಕ್ತರಿಗೆ ನೇರವಾಗುತ್ತಾ ಬರುತ್ತಿವೆ. ಇಂತಹ ಶಾಖೆಗಳಲ್ಲಿ ಒಂದು ಕೇರಳದ ಕಾಸರಗೋಡಿನ ಬಿರುವೆರ್ ಕುಡ್ಲ ಮಂಜೇಶ್ವರ ತಾಲೂಕು ತಂಡ.

ಕನಿಷ್ಠ ಪ್ರಮಾಣದ ಉತ್ಸಾಹಿ ಸದಸ್ಯರನ್ನು ಒಳಗೊಂಡ ತಂಡ ಆರಂಭವಾಗಿ 10 ತಿಂಗಳುಗಳಾಗುತ್ತಾ ಬಂದಿದೆ. ಕಳೆದ 10 ತಿಂಗಳಿನಲ್ಲಿ ಸಮಾಜಮುಖಿ ಕೆಲಸಕಾರ್ಯಗಳಲ್ಲಿ 6 ಸೇವಾಯೋಜನೆಯನ್ನು ಮಾಡುವುದರ ಮೂಲಕ ಮುಂದಕ್ಕೆ ಹೆಜ್ಜೆ ಇಡುತ್ತಿದೆ.

ನಮ್ಮ ತಂಡದ 6 ನೆಯ ಸೇವಾಯೋಜನೆಯನ್ನು ಮೀಂಜ ಪಂಚಾಯತಿನ ಕಲ್ಲಗದ್ದೆ ಸುಂದರ ಪೂಜಾರಿಯವರಿಗೆ ನೀಡಲಾಯಿತು.ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಇವರು ಬೈಕಿನಿಂದ ಬಿದ್ದು ಬೆನ್ನೆಲುಬು ಮುರಿದು ಕೆಲಸಮಾಡಲು ಸಾಧ್ಯವಾಗದ ಸ್ಥಿತಿಯಲ್ಲಿ ಇದ್ದಾರೆ.ಇವರಿಗೆ 1 ಗಂಡು ಹಾಗೂ 10 ವರ್ಷ ಪ್ರಾಯದ ತ್ರಿವಳಿ ಹೆಣ್ಣುಮಕ್ಕಳಿದ್ದಾರೆ.ಇವರ ಮನೆಯ ಶೋಚನೀಯ ಅವಸ್ಥೆಯನ್ನು ಮನಗಂಡ ನಮ್ಮ ತಂಡ ರೂ.25000 /-ಮೊತ್ತವನ್ನು ಅವರಿಗೆ ನಿನ್ನೆ ಹಸ್ತಾಂತರಿಸಲಾಯಿತು*. ಸಂಘಟನೆಯ ಗೌರವಾಧ್ಯಕ್ಷರಾದ ಶೀನಪ್ಪ ಪೂಜಾರಿ ಅಲಾರು,ಕಾರ್ಯದರ್ಶಿ ಅನಿಲ್ ಪ್ರತಾಪ್ ನಗರ,ಸದಸ್ಯರಾದ ಐತಪ್ಪ ಪೂಜಾರಿ ಅರಿಯಾಲ ಮುಂತಾದ ಸದಸ್ಯರು ಭಾಗವಹಿಸಿದ್ದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »