08/08/2026

ಮಂಗಳೂರು ದಸರಾ: ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರ ಸಾಂಕೇತಿಕವಾಗಿ ಪ್ರದಕ್ಷಿಣೆ

0

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ಮಂಗಳೂರು ‘ದಸರಾ ಮಹೋತ್ಸವ’ ಅಂಗವಾಗಿ ಈ ಬಾರಿ ದಸರಾ ಶೋಭಾಯಾತ್ರೆಯ ಬದಲು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರವನ್ನು ಸಾಂಕೇತಿಕವಾಗಿ ರಾಜಬೀದಿಯಲ್ಲಿ ನಗರ ಪ್ರದಕ್ಷಿಣೆ ನಡೆಸಲು ಎಂದು ದೇವಳ ಆಡಳಿತ ಮಂಡಳಿ ನಿರ್ಧರಿಸಿದೆ.

ಕುದ್ರೋಳಿ ಕ್ಷೇತ್ರದಿಂದ ಅಕ್ಟೋಬರ್.26ರಂದು ಸಂಜೆ 6ಗಂಟೆಗೆ ನಾರಾಯಣ ಗುರು ಭಾವಚಿತ್ರವಿರುವ ಟ್ಯಾಬ್ಲೋ ಹೊರಡಲಿದ್ದು, ವಾಹನದಲ್ಲಿ ಸೀಮಿತ ಭಕ್ತಾದಿಗಳು ಮಾತ್ರ ಭಾಗವಹಿಸಲಿದ್ದಾರೆ. ಈ ಟ್ಯಾಬ್ಲೋ ಕಂಬಳ ರಸ್ತೆ, ಮಣ್ಣಗುಡ್ಡ ಮಾರ್ಗವಾಗಿ ಲೇಡಿಹಿಲ್ ಸರ್ಕಲ್, ಲಾಲ್‌ಭಾಗ್, ಬಲ್ಲಾಳ್‌ಬಾಗ್, ಪಿವಿಎಸ್, ನವಭಾರತ್ ಸರ್ಕಲ್, ಕೆ.ಎಸ್. ರಾವ್ ರಸ್ತೆ, ಪಿಎಂ ರಾವ್ ರೋಡ್ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗಕ್ಕೆ ಬಂದು ವಿ.ಟಿ. ರಸ್ತೆ ಮೂಲಕ ನವಭಾರತ್ ಸರ್ಕಲ್‌ಗೆ ಮರಳಿ ಚಿತ್ರಾ ಟಾಕೀಸು, ಅಳಕೆಯಾಗಿ ಶ್ರೀ ಕ್ಷೇತ್ರಕ್ಕೆ ಆಗಮಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.


Leave a Reply

Your email address will not be published. Required fields are marked *

You may have missed