“ಕುಳಾಯಿ ಫೌಂಡೇಶನ್”ನಿಂದ 250 ಬಡಮಕ್ಕಳ ದತ್ತು ಸ್ವೀಕಾರ -ಪ್ರತಿಭಾ ಕುಳಾಯಿ
ಸುರತ್ಕಲ್: ಸ್ತ್ರೀ ಸಬಲೀಕರಣ, ಬಡಮಕ್ಕಳ ಶಿಕ್ಷಣ ಹಾಗೂ ಸರಕಾರಿ ಶಾಲೆಗಳ ಅಭಿವೃದ್ಧಿ ಧ್ಯೇಯವನ್ನಿಟ್ಟುಕೊಂಡು ಸ್ಥಾಪಿಸಿರುವ“ಕುಳಾಯಿ ಫೌಂಡೇಶನ್” ಈ ಶೈಕ್ಷಣಿಕ ವರ್ಷದಲ್ಲಿ ಸುಮಾರು 250 ಮಂದಿ ಸಾಮಾಜಿಕ ಹಾಗೂ ಆರ್ಥಿಕ ಹಿಂದುಳಿದ ಮಕ್ಕಳಸಂಪೂರ್ಣ ವಿದ್ಯಾಭ್ಯಾಸದ ಖರ್ಚು ವೆಚ್ಚ ನಿಭಾಯಿಸುವ ಜೊತೆಗೆ ಅವರನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ದತ್ತು ಪಡೆಯುವ ಯೋಜನೆಹಾಕಿಕೊಂಡಿದೆ ಎಂದು ಫೌಂಡೇಶನ್ ಸ್ಥಾಪಕಿ ಪ್ರತಿಭಾ ಕುಳಾಯಿ ಹೇಳಿದರು. ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿಮಾತಾಡಿದ ಅವರು, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಪಾಲಿಸಿಕೊಂಡುಮುನ್ನಡೆಯುತ್ತಿರುವ ಫೌಂಡೇಶನ್ ಮೂಲಕ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ಕೊಡಲಾಗುವುದು ಮಾತ್ರವಲ್ಲದೆ ಅವರಮುಂದಿನ ಉದ್ಯೋಗ ಭದ್ರತೆಗಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.
2019ರಲ್ಲಿ ಸ್ಥಾಪನೆಯಾಗಿರುವ ಕುಳಾಯಿ ಫೌಂಡೇಶನ್ ಈಗಾಗಲೇ 131 ಮಂದಿ ಬಡಮಕ್ಕಳ ಶಿಕ್ಷಣಕ್ಕೆ ನೆರವು ನೀಡುತ್ತಾ ಬಂದಿದೆ. ಕಳೆದ ಎರಡು ವರ್ಷಗಳ ಕೊರೋನಾ ಹಾವಳಿ, ಲಾಕ್ ಡೌನ್ ಸಂದರ್ಭದಲ್ಲಿ ಮಂಗಳೂರಿನ ಹಂಪನಕಟ್ಟೆಯಲ್ಲಿ ಪ್ರತಿನಿತ್ಯ 250 ಮಂದಿ ಕೂಲಿ ಕಾರ್ಮಿಕರು ಹಾಗೂ ನಿರ್ಗತಿಕರಿಗೆ ಊಟ ನೀಡಿದ್ದಲ್ಲದೆ ಕಿಟ್ ಗಳನ್ನು ವಿತರಿಸಿ ಮಾನವೀಯತೆಯನ್ನು ಮೆರೆದಿದೆ. ಕುಳಾಯಿ ಫೌಂಡೇಶನ್ ವತಿಯಿಂದ ಮುಂದಿನ ದಿನಗಳಲ್ಲಿ ಸರಕಾರಿ ಶಾಲೆಗಳನ್ನು ದತ್ತು ಪಡೆದು ಆಂಗ್ಲಮಾಧ್ಯಮ ಕಲಿಕೆಗೆ ಒತ್ತುನೀಡುವ ಕಾರ್ಯಕ್ರಮ ರೂಪಿಸಲಾಗುವುದು ಅಲ್ಲದೆ ಸರಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಕಾರ್ಯಕ್ರಮಆಯೋಜಿಸಲಾಗುವುದು ಎಂದರು.
ಈ ಶೈಕ್ಷಣಿಕ ವರ್ಷದಲ್ಲಿ ಕಾಲೇಜು ಪ್ರಾರಂಭವಾಗಿದ್ದು ಫೀಸ್ ಕಟ್ಟಲು ಕಷ್ಟಪಡುವ ವಿದ್ಯಾರ್ಥಿಗಳಿಗೆ ತಕ್ಷಣವೇ ಫೀಸ್ ಕಟ್ಟಲುಆರ್ಥಿಕವಾಗಿ ಸಹಾಯ ಮಾಡಲಾಗುವುದು, ಮುಖ್ಯವಾಗಿ ಪಿಯು, ಪದವಿ, ಡಿಪ್ಲೋಮ, ಐಟಿಐ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳುಇದರ ಸದುಪಯೋಗ ಪಡೆದುಕೊಳ್ಳಬೇಕು. ಅರ್ಜಿಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು ಅಥವಾ ಫೋನ್ ನಂಬರ್ಸಂಪರ್ಕಿಸಲು ಕೋರಿದ್ದಾರೆ.
ಪ್ರತಿಭಾ ಕುಳಾಯಿ
ಕುಳಾಯಿ ಫೌಂಡೇಶನ್
ವಿ.ಟಿ. ರೋಡ್
ಕುಳಾಯಿ ಮಂಗಳೂರು
575019
ಮೊಬೈಲ್ ಸಂಖ್ಯೆ :9964756410
