TOP STORIES:

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


 ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ ಒಮ್ಮತ ಮತ್ತು ಸಹಕಾರದ ಜೀವನವನ್ನು ನಾವು ಅನುಸರಿಸಿಕೊಂಡು ಬಂದಿದ್ದೇವೆ. ಕಾಲಕ್ರಮೇಣ ಪರ ಊರುಗಳು, ಪರ ದೇಶಗಳತ್ತ ತೆರಳಿ, ಅಲ್ಲಿ ಕೂಡಾ ಯಶಸ್ವಿ ಬದುಕನ್ನು ಕಟ್ಟಿಕೊಂಡಿದ್ದೇವೆ.

 

ಈ ಪುಟ್ಟ ದೇಶವಾದ ಓಮಾನ್‌ನಲ್ಲಿಯೂ ನಮ್ಮ ಕೂಟಗಳ ಮುಖೇನ ಒಂದಾಗಿ, ದೈವ,ದೇವಾಲಯ ನಿರ್ಮಾಣದಿಂದ ಹಿಡಿದು ಅನೇಕ ಸಾಮಾಜಿಕ ಹಾಗೂ ಮಾನವೀಯ ಕೊಡುಗೆಗಳ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇವೆ. ದುಡಿದು ಉಳಿಸಿದ ಹಣದಿಂದ ಸಾಧ್ಯವಾದಷ್ಟು ನಮ್ಮವರಿಗೂ, ಅಗತ್ಯವಿರುವ ಬಂಧು-ಮಿತ್ರರಿಗೂ ಆಸರೆಯಾಗುತ್ತಿದ್ದೇವೆ. ಅದರ ಜೊತೆಗೆ, ನಮ್ಮ ಕರ್ಮಭೂಮಿಗೂ ಏನಾದರೂ ನಮ್ಮಿಂದ ಕೊಡುಗೆ ಇರಬೇಕು ಎಂಬ ನಿಟ್ಟಿನಲ್ಲಿ ಕೈಗೊಂಡ ಅತ್ಯಂತ ಮಹತ್ವದ ಸೇವೆಯೇ ರಕ್ತದಾನ ಶಿಬಿರ

 

ಒಂದು ಸಮಯದಲ್ಲಿ ಓಮಾನ್ ನಲ್ಲಿ ರಕ್ತದಾನ ಶಿಬಿರಗಳು ಹೆಚ್ಚಾಗಿ ಭಾರತೀಯ ಸಾಮಾಜಿಕ ಸಂಸ್ಥೆಗಳ ಮೂಲಕ ಅಥವಾ ಕೆಲವು ಕಂಪನಿಗಳ ಸಹಕಾರದಿಂದ ನಡೆಯುತ್ತಿದ್ದವು. ಆ ದಿನಗಳಲ್ಲಿ ಕರ್ನಾಟಕದ ಕಡೆಯಿಂದ, ವಿಶೇಷವಾಗಿ ಸಮುದಾಯಿಕವಾಗಿ ಇಂತಹ ಶಿಬಿರಗಳು ಹೆಚ್ಚಾಗಿ ನಡೆಯುತ್ತಿರಲಿಲ್ಲ. ಆದರೆ 2017ರಲ್ಲಿ ನಮ್ಮ ಬಿಲ್ಲವ ಬಂಧುಗಳು ಒಂದಾಗಿ ಮೊದಲ ಬಾರಿಗೆ ರಕ್ತದಾನ ಶಿಬಿರವನ್ನು ಆಯೋಜಿಸಿ, ಸುಮಾರು 65 ಜನರು ರಕ್ತದಾನ ಮಾಡುವ ಮೂಲಕ ಜೀವ ಉಳಿಸುವ ಕಾರ್ಯಕ್ಕೆ ಭದ್ರವಾದ ಚಾಲನೆ ನೀಡಿದರು.

 

ಅದರ ನಂತರದ ದಿನಗಳಲ್ಲಿ ನಮ್ಮ ಶಿಬಿರಗಳು ಸಾವಿರ ಯುನಿಟ್‌ಗಿಂತಲೂ ಹೆಚ್ಚು ರಕ್ತವನ್ನು ದಾನವಾಗಿ ಓಮನ್ ಬ್ಲಡ್ ಬ್ಯಾಂಕ್ ಗೆ ನೀಡಿರುವುದು ಗಮನಾರ್ಹ ಸಾಧನೆ. ರಕ್ತ ಶೇಖರಣೆ ಕಡಿಮೆಯಾದಾಗ ಅಥವಾ ವಿಶೇಷವಾಗಿ O ಪಾಸಿಟಿವ್ ರಕ್ತದ ಅಗತ್ಯವಿದ್ದ ಸಂದರ್ಭಗಳಲ್ಲಿ, ರಕ್ತ ಬ್ಯಾಂಕ್‌ಗಳಿಂದ ನಮ್ಮನ್ನು ನೇರವಾಗಿ ಸಂಪರ್ಕಿಸುವ ಮಟ್ಟಿಗೆ ನಮ್ಮ ಸೇವೆ ವಿಶ್ವಾಸಾರ್ಹವಾಗಿ ಬೆಳೆದಿದೆ.

 

ನಮ್ಮ ಶಿಬಿರಗಳ ಯಶಸ್ಸನ್ನು ಕಂಡು, ಇತರ ಜಾತಿ ಸಮುದಾಯದ ವರು ಹಾಗೂ ಅನ್ಯ ಧರ್ಮದವರೂ ಕೂಡಾ ನಮ್ಮ ಮಾದರಿಯನ್ನು ಅನುಸರಿಸಿ ರಕ್ತದಾನ ಶಿಬಿರಗಳನ್ನು ಆಯೋಜಿಸಿ ಜೀವ ಉಳಿಸುವ ಕಾರ್ಯಕ್ಕೆ ಮುಂದಾದರು. ಈ ಮೂಲಕ ನಮ್ಮ ಬಿಲ್ಲವ ಬಂಧುಗಳ ಸೇವೆ ಮಸ್ಕತ್‌ನಲ್ಲಷ್ಟೇ ಅಲ್ಲದೆ ಇತರ ಗಲ್ಫ್ ದೇಶಗಳಲ್ಲಿಯೂ ಪ್ರಶಂಸೆಗೆ ಪಾತ್ರವಾಯಿತು.

 

ರಕ್ತದಾನ ಶಿಬಿರವು ಕೇವಲ ದಾನದ ಕಾರ್ಯಕ್ರಮವಾಗಿರಲಿಲ್ಲ; ಅದು ನಮ್ಮತನದ, ಸೇರಿಕೆಯ ಮತ್ತು ಸಹೋದರತ್ವದ ಸಂಕೇತವಾಗಿತ್ತು. ನೂಲ ಹುಣ್ಣುಮೆಯ ತಿಂಗಳಲ್ಲಿ ನಡೆದ ಶಿಬಿರದಲ್ಲಿ ರಾಕಿ ಕಟ್ಟುವ ಕಾರ್ಯವನ್ನು ಮಾಡಲಾಗಿತ್ತು. ರಕ್ತ ದಾನಿಗಳಗಿ ನಮ್ಮ ಬಿಲ್ಲವ ಮಹಿಳಾ ಬಳಗವು ಪುರುಷರಷ್ಟೆ ಉತ್ಸಾಹ ತೋರಿದರು. ಕೋವಿಡ್‌ ನಂತರದ ಸಮಯದಲ್ಲಿಯೂ ಶಿಬಿರ ಅಯೂಜನೆ ನಡೆದವು ಮಾನವೀಯ ಸಂಬಂಧಗಳ ಮೌಲ್ಯವನ್ನು ಇನ್ನಷ್ಟು ಗಟ್ಟಿಗೊಳಿಸಿದ್ದೇವೆ ಎನ್ನುವ ಸಾರ್ಥಕ ಭಾವನೆ ನಮ್ಮಲ್ಲಿ ಎಂದಿಗೂ…..

ತಾವೂ ಬನ್ನಿ ತಮ್ಮವರ ಕರೆ ತನ್ನಿ ಜೀವ ಉಳಿಸುವ ಕಾರ್ಯಕ್ಕೆ ಜೈ ಎನ್ನಿ.

 

🙏🙏🙏

ಮಾನ್ಯದಲಿ

ಶಿವಾನಂದ ಕೋಟ್ಯಾನ್.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »