08/08/2026

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಚುನಾವಣಾ ಪ್ರಚಾರಕ್ಕಾಗಿ ಶ್ರೀ ನಾರಾಯಣ ಗುರು ಹಾಗೂ ಕೋಟಿ-ಚೆನ್ನಯರ ದುರ್ಬಳಕೆ

0
IMG_20240414_150344

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ತಮ್ಮ ಚುನಾವಣಾ ಪ್ರಚಾರಕ್ಕಾಗಿ ಸಮಾಜ ಸುಧಾರಕ ಶ್ರೀ ನಾರಾಯಣ ಗುರು ಹಾಗೂ ತುಳುನಾಡಿನ ಅವಳಿ ಯೋಧರಾದ ಕೋಟಿ-ಚೆನ್ನಯರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ, ಪುಷ್ಪ ನಮನ ನಾಟಕ ಬಿಲ್ಲವ ಸಮುದಾಯವನ್ನು ಮೂರ್ಖರನ್ನಾಗಿಸುವ ಯತ್ನವಾಗಿದ್ದು, ಇದನ್ನು ತೀವ್ರವಾಗಿ ಖಂಡಿಸಬೇಕು.

 

ಶ್ರೀ ನಾರಾಯಣ ಗುರು ಹಾಗೂ ಅವಳಿ ವೀರರಾದ ಕೋಟಿ-ಚೆನ್ನಯರನ್ನು ಅವಮಾನಿಸಿದ ಬಿಜೆಪಿ ಈಗ ಬಿಲ್ಲವ ಮತಗಳ ಮೇಲೆ ಕಣ್ಣಿಟ್ಟು ಹೊಸ ನಾಟಕವಾಡುತ್ತಿದೆ. ಕೇಂದ್ರದ ಬಿಜೆಪಿ ಸರ್ಕಾರವು ಗಣರಾಜ್ಯೋತ್ಸವ ಪರೇಡ್‌ಗೆ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ತಿರಸ್ಕರಿಸಿದ್ದನ್ನು ಉಲ್ಲೇಖಿಸಿ ಮತ್ತು ಕರ್ನಾಟಕದ ಹಿಂದಿನ ಸರ್ಕಾರವು ಶಾಲಾ ಪಠ್ಯಪುಸ್ತಕದಿಂದ ನಾರಾಯಣ ಗುರು ಪಾಠವನ್ನು ಹೊರಗಿಟ್ಟಿದೆ.

ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿದ್ದರೂ ಬಿಜೆಪಿಯವರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (MIA) ಕೋಟಿ-ಚೆನ್ನಯ ಹೆಸರನ್ನು ಏಕೆ ಮರುನಾಮಕರಣ ಮಾಡಲಿಲ್ಲ? ಈಗ ಚುನಾವಣೆಯ ಸಂದರ್ಭದಲ್ಲಿ ಈ ವಿಷಯವನ್ನು ಏಕೆ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ? ಬಿಲ್ಲವ ಮತಗಳನ್ನು ಕಳೆದುಕೊಳ್ಳುವ ಭಯದಿಂದ ಬಿಜೆಪಿಯವರು ಚುನಾವಣಾ ಪ್ರಚಾರದಲ್ಲಿ ಶ್ರೀ ನಾರಾಯಣ ಗುರು ಮತ್ತು ಕೋಟಿ ಚೆನ್ನಯರ ಚಿತ್ರಗಳನ್ನು ಬಳಸುತ್ತಿದ್ದಾರೆ.ಶ್ರೀ ನಾರಾಯಣ ಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಆರೋಪಿಸಿದ್ದಾರೆ


Leave a Reply

Your email address will not be published. Required fields are marked *

You may have missed