TOP STORIES:

ಎಪ್ರಿಲ್ ತಿಂಗಳ ಅಕ್ಷಯ ಮಾಸ ಪತ್ರಿಕೆಯಲ್ಲಿ ಪ್ರಕಟವಾದ ಕವಿತೆ : ರೈಲು


ರೈಲು

ಎಲ್ಲರಂತಲ್ಲ ನಾನು…

ಬಯಲ ಬೆಳಕಿನಲ್ಲಿ ಕತ್ತಲು ಕೊರೆಯುವಲ್ಲಿ

ಓಡಬೇಕು; ಓಡುತ್ತಲೇ ಇರಬೇಕು

ಅಬ್ಬರದಿ ಬಂದೆರಗುವ ಜನಸಾಗರಕೆ ತೀರವಾಗಬೇಕು

  ಶಾಂತವಾಗಿ ನಿರ್ವಾಹವಾಗಿ ಜೀವಜೀವಗಳ  ನಿಜಬಂಧುವಾಗಿ

ತುಂಬಿಕೊಂಡಂತೆ ಖಾಲಿಯಾಗುತ್ತಲೇ ಇರಬೇಕು

ಜೀವನದ ಇತಿಮಿತಿಯಲಿ ಗತಿ ತಿರುಗಿದಂತೆ

ಹಳಿಗಳೂ ಬದಲಾಗುತ್ತವೆ, ಎಲ್ಲೋ ಕವಲೊಡೆದು ಇನ್ನೆಲ್ಲೋ ಕೂಡುತ್ತವೆ

ಉದ್ವೇಗ ಉನ್ಮಾದಗಳ ಬದಿಗೊತ್ತಿ ನಯನಾಜೂಕಿನಲಿ ನಡೆಯಬೇಕು

ಕೆಂಪು ನಿಶಾನೆಯೆದುರು ಸಮಾಧಾನಿಯಾಗಿರಬೇಕು

ಎಲ್ಲರಂತಲ್ಲ ನಾನು

ಕನಸಿಗೆ ಕಚಗುಳಿಯಿಟ್ಟು ನೂಕುವ ರಾಯಭಾರಿಯಾಗಬೇಕು

ಚಿಣ್ಣರ ಕೇಕೆ, ಹರೆಯದ ಬಯಕೆ, ಇಳಿವಯಸ್ಸಿನ ಬೇಗೆಗೆ

ನಿತ್ಯವೂ ಹೊಸ ಆಹ್ಲಾದವನೀಯುತ ಭರವಸೆಯ ಬೆಳಕಾಗಬೇಕು

ಮುಗ್ಗರಿಸಿದವರ ನೋವಿಗೆ  ಸಾಂತ್ವನವಾಗಬೇಕು

ಅರಿವಿನ ಅರವಟಿಗೆಯಲಿ ಒಡಲು ಗಟ್ಟಿಯಾಗುತಿರಬೇಕು

ನವರಸ ಭಾವ ವಿಭಾವಗಳ ತಾಳಮೇಳದೊಳಗೆ

ಕೋಟಿ ಮನಸ್ಸುಗಳು ಹರಿಯುವುದು ನನ್ನೊಳಗೆ

ಸ್ವರ ವ್ಯಂಜನದೊಳು ಮೂಡಿದ ಬಿರುಕಿಗೆ ತೇಪೆ ಹಾಕಿ

ಸಮರಸ ಸಂಧಾನದ ಉಸಿರು ಚೆಲ್ಲಿ ಮುಂದಡಿಯಿಡಬೇಕು

ನನ್ನಾಂತರ್ಯದೊಳಿರುವ ಪ್ರೇಮ, ವಿರಹ ಗೀತೆಗಳೆಷ್ಟೋ…!

ಕಣ್ಣಂಜಿಕೆಗೆ ಮುಖ ಮರೆಸಿ ಕೂತ ಗುಟ್ಟುಗಳೆಷ್ಟೋ…!

ಯುಗಯುಗಾಂತರದಲಿ ಘಟಿಸಿ ಹೋದ ಕತೆಗಳಲೂ

ಮುಖ್ಯ ಪಾತ್ರಧಾರಿ, ಪರಮ ಸೂತ್ರಧಾರಿಯೂ ನಾನೇ

ಎಲ್ಲರಂತಲ್ಲ ನಾನು

ಸಾಗುತ್ತಲೇ ಇರಬೇಕು

ನಿಂತರೆ ಸ್ತಬ್ದವಾಗಬಹುದಲ್ಲವೇ ಯಾನ…!

ನಗರದ ನರನಾಡಿಗಳಲಿ ಪವಹಿಸಿ ಪಥಿಕರ ಗಮ್ಯವಾಗಬೇಕು

ನಿತ್ಯ ಪಥದ ಧ್ಯಾನಿಯಾಗಬೇಕು.

✍🏻 ಅನಿತಾ ಪಿ. ತಾಕೊಡೆ


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »