08/08/2026

ಬೆಳ್ತಂಗಡಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ವಸಂತ ಬಂಗೇರರ ಹೆಸರಿಡಲು ಮನವಿ

0
Screenshot

Screenshot


ಬೆಳ್ತಂಗಡಿ: 5 ಬಾರಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾಗಿ, ಕಳೆದ 50 ವರ್ಷದಲ್ಲಿ ಕ್ಷೇತ್ರದ ಬಡ ಜನತೆಯ ಧ್ವನಿಯಾಗಿ ಕೆಲಸ ಮಾಡಿ ಇಹಲೋಕ ತ್ಯಜಿಸಿದ ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸ್ಥಾಪನೆಗೆ ಕಾರಣಕರ್ತರು ಹಾಗೂ ಸಂಘದ ವಾಣಿಜ್ಯ ಸಂಕೀರ್ಣದ ರೂವಾರಿ; ಸಂಘದ ಗೌರವಾದ್ಯಕ್ಷರಾಗಿದ್ದ ವಸಂತ ಬಂಗೇರರ ಹೆಸರಿನಲ್ಲಿ ಬೆಳ್ತಂಗಡಿ ಪೇಟೆಯ ಹೆದ್ದಾರಿಯ ಮುಖ್ಯ ವೃತ್ತದಲ್ಲಿ ಬಂಗೇರರ ಕಂಚಿನ ಪುತ್ಥಳಿ ನಿರ್ಮಿಸಲು ಮತ್ತು ಬೆಳ್ತಂಗಡಿಯಲ್ಲಿ ನಿರ್ಮಾಣವಾಗುತ್ತಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ವಸಂತ ಬಂಗೇರರ ಹೆಸರು ಇಡುವಂತೆ ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಲು ಮೇ 11ರಂದು ನಡೆದ ಸಂಘದ ಮಾಸಿಕ ಸಭೆಯಲ್ಲಿ ಸರ್ವಾನುಮತದ ನಿರ್ಣಯಿಸಲಾಯಿತು. ಸಭೆಯಲ್ಲಿ ವಸಂತ ಬಂಗೇರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು.ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಉಪಾಧ್ಯಕ್ಷ ಸುಂದರ ಪೂಜಾರಿ, ಪ್ರಧಾನ ಕಾರ್ಯದರ್ಶಿ ನಿತೇಶ್ ಎಚ್. ಕೋಟ್ಯಾನ್, ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ, ಜೊತೆ ಕಾರ್ಯದರ್ಶಿ ಸಂತೋಷ್ ಉಪ್ಪಾರ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ. ಪ್ರಸಾದ್, ಮಾಜಿ ಅಧ್ಯಕ್ಷರುಗಳಾದ ಪಿತಾಂಬರ ಹೆರಾಜೆ, ಯೋಗೀಶ್ ಕುಮಾರ್ ನಡಕ್ಕರ, ಚಿದಾನಂದ ಪೂಜಾರಿ, ಜಯರಾಮ ಬಂಗೇರ, ಮಾಜಿ ಉಪಾಧ್ಯಕ್ಷ ಮನೋಹರ ಕುಮಾರ್, ನಿರ್ದೇಶಕರುಗಳಾದ ಸಂಜೀವ ಪೂಜಾರಿ, ಜಯ ಕುಮಾರ್, ಉಷಾ ಶರತ್, ವಿನೋದಿನಿ ರಾಮಪ್ಪ, ರಾಜಶ್ರೀ ರಮಣ್, ಪ್ರಮೋದ್ ಮಚ್ಚಿನ, ರಾಜೀವ ಸಾಲಿಯಾನ್, ರವೀಂದ್ರ ಬಿ. ಅಮೀನ್, ನಾರಾಯಣ ಪೂಜಾರಿ, ವಿಶ್ವನಾಥ ಸಾಲಿಯಾನ್ , ಚಂದ್ರಶೇಖರ ಮತ್ತು ಕಮಲಾಕ್ಷ, ಸುಚೇತ್ ಸಾಲಿಯಾನ್ ಮುಂತಾದವರು ಉಪಸ್ಥಿತರಿದ್ದರು.


Leave a Reply

Your email address will not be published. Required fields are marked *

You may have missed