08/08/2026

ಆಷಾಢ ಮಾಸಕ್ಕೆ ಗಂಡ ಹೆಂಡತಿ ಒಟ್ಟಿಗೆ ಇರುವಂತಿಲ್ಲ ಯಾಕೆ?

0
Screenshot

Screenshot


ಆಷಾಢ ಮಾಸವನ್ನು ಅಶುಭವೆಂದೇ ಪರಿಗಣಿಸಲಾಗುತ್ತದೆ. ಹೀಗಾಗಿ ಈ ಮಾಸದಲ್ಲಿ ಶುಭ ಕಾರ್ಯಗಳು ನಡೆಯುವುದಿಲ್ಲ. ಅದಲ್ಲದೇ, ಹೊಸದಾಗಿ ಮದುವೆಯಾದ ದಂಪತಿಗಳಿಬ್ಬರೂ ಪರಸ್ಪರ ದೂರವಿರಬೇಕಾದ ಕಾರಣ ಹೆಣ್ಣು ಮಕ್ಕಳು ಗಂಡನ ಮನೆಯಿಂದ ತವರು ಮನೆಗೆ ತೆರಳುತ್ತಾರೆ. ಹಾಗಾದ್ರೆ ಈ ಆಚರಣೆಯ ಹಿಂದಿರುವ ಕಾರಣವೇನು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಹಿಂದೂ ಧರ್ಮದ ಚಾಂದ್ರಮಾನ ಪಂಚಾಂಗದ ನಾಲ್ಕನೇ ಮಾಸ ಈ ‘ಆಷಾಢ’. ದಕ್ಷಿಣಾಯಣದ ಪರ್ವ ಕಾಲದಲ್ಲಿ ಜೇಷ್ಠ ಮಾಸದ ಅಮವಾಸ್ಯೆಯ ಮರುದಿನವಾದ ಪಾಡ್ಯ ತಿಥಿಯಿಂದ ಆಷಾಢ ಮಾಸ ಆರಂಭವಾಗುತ್ತದೆ. ಈ ವರ್ಷ ಆಷಾಢ ಮಾಸವು ಜುಲೈ 6 ರಂದು ಪ್ರಾರಂಭವಾಗಿ ಆಗಸ್ಟ್ 4 ರಂದು ಕೊನೆಗೊಳ್ಳುತ್ತದೆ. ಈ ಮಾಸದಲ್ಲಿ ಹೊಸದಾಗಿ ಮದುವೆಯಾದ ಹೆಣ್ಣು ಮಕ್ಕಳು ತವರಿಗೆ ಬರುವ ಸಂಪ್ರದಾಯವಿದೆ. ಆಂಧ್ರ ಪ್ರದೇಶದಲ್ಲಿ ಆಷಾಢ ಮಾಸದಲ್ಲಿ ಅತ್ತೆ-ಸೊಸೆ ಕೂಡ ಜೊತೆಯಾಗಿರಬಾರದು ಎನ್ನಲಾಗುತ್ತದೆ

ಆಷಾಢ ಮಾಸದಲ್ಲಿ ನವವಿವಾಹಿತರು ದೂರವಿರಬೇಕು ಎನ್ನುವ ಕಾರಣ ಹೆಣ್ಣು ಮಕ್ಕಳು ತವರಿಗೆ ಬರುವ ಸಂಪ್ರದಾಯವಿದೆ. ಈ ಸಮಯದಲ್ಲಿ ಗಂಡ ಹೆಂಡತಿ ಸೇರಿ ಹೆಣ್ಣು ಗರ್ಭವತಿಯಾದರೆ, ಚೈತ್ರ ಮಾಸದಲ್ಲಿ ಮಗುವಿಗೆ ಜನ್ಮ ನೀಡಬಹುದು. ಈ ಏಪ್ರಿಲ್ ತಿಂಗಳಿನಲ್ಲಿ ಉಷ್ಣಾಂಶ ಹೆಚ್ಚಾಗಿರುತ್ತದೆ. ಇದರಿಂದ ತಾಯಿ ಹಾಗೂ ಮಗುವಿಗೆ ಆರೋಗ್ಯ ಸಮಸ್ಯೆಗಳು ಕಾಡಬಹುದು ಎನ್ನುವ ವೈಜ್ಞಾನಿಕ ಕಾರಣವು ಇದೆ.

ಅಷ್ಟೇ ಅಲ್ಲದೇ ಈ ಆಷಾಢ ತಿಂಗಳಿನಲ್ಲಿ ರೈತಾಪಿ ವರ್ಗಕ್ಕೆ ಕೆಲಸಗಳು ಸ್ವಲ್ಪ ಹೆಚ್ಚಾಗಿರುತ್ತದೆ. ಈ ಸಮಯದಲ್ಲಿ ಹೊಸದಾಗಿ ಮದುವೆಯಾದ ಜೋಡಿಗಳು ಜೊತೆಗಿದ್ದರೆ, ಪತಿಯು ಪತ್ನಿಯ ಜೊತೆಗೆ ಸಮಯ ಕಳೆಯಬಹುದು. ಹೀಗಾದಾಗ ಕೃಷಿ ಕೆಲಸಗಳು ಪೂರ್ಣಗೊಳ್ಳದೇ ಇರಬಹುದು. ಆತನು ಸಂಪೂರ್ಣವಾಗಿ ಕೆಲಸದಲ್ಲಿ ತೊಡಗಿಕೊಳ್ಳಲಿ ಎನ್ನುವ ಕಾರಣಕ್ಕೆ ಆಷಾಢದಲ್ಲಿ ತವರಿಗೆ ಹೆಣ್ಣು ಮಕ್ಕಳನ್ನು ಕಳುಹಿಸಿಕೊಡುತ್ತಾರೆ.

ದೂರವಿರುವ ಅತ್ತೆ ಸೊಸೆ ನಡುವೆ ಪ್ರೀತಿ ಹೆಚ್ಚುತ್ತೆ

ಇನ್ನೊಂದು ನಂಬಿಕೆಯ ಪ್ರಕಾರ ಆಷಾಢ ಮಾಸದಲ್ಲಿ ಹೊಸದಾಗಿ ಮದುವೆಯಾದ ಹೆಣ್ಣು ತನ್ನ ಅತ್ತೆಯೊಂದಿಗಿದ್ದರೆ ಜಗಳಗಳು ಉಂಟಾಗುತ್ತದೆ. ಹೀಗಾಗಿ ಸೊಸೆಯನ್ನು ಒಂದು ತಿಂಗಳ ಕಾಲ ತವರು ಮನೆಗೆ ಕಳುಹಿಸಲಾಗುತ್ತದೆ. ಇಬ್ಬರೂ ದೂರವಿದ್ದರೆ ಅತ್ತೆ ಸೊಸೆಯ ನಡುವೆ ಪ್ರೀತಿ ಕಾಳಜಿಯು ಹೆಚ್ಚುತ್ತದೆ. ಅದಲ್ಲದೇ ತಾಯಿ ಮಗಳು ಸಂಬಂಧವು ಗಟ್ಟಿಯಾಗುತ್ತದೆ ಎನ್ನಲಾಗಿದೆ.


Leave a Reply

Your email address will not be published. Required fields are marked *

You may have missed