09/08/2026

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ

0
Screenshot

Screenshot


ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್ ಪಡು ಆಯ್ಕೆಯಾಗಿದ್ದು ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024ರ ಅ.2ರಂದು ಪ್ರಕಟವಾಗಿದ್ದ ‘ಹುಲಿ ವೇಷಕ್ಕೆ ಖದರ್ ನೀಡಿದ್ದ ಆಸಿಫ್’ ವರದಿಗೆ ಪ್ರಶಸ್ತಿ ಲಭಿಸಿದೆ.

ಇಂದು ಜೂ.25 ಬೆಳಗ್ಗೆ 11 ಗಂಟೆಗೆ ಪತ್ರಿಕಾ ಭವನದಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಪ್ರಶಸ್ತಿ ಪ್ರದಾನಿಸಿದರು.

ಹೊಸದಿಗಂತ ಪತ್ರಿಕೆ ಮೂಲಕ ಪತ್ರಿಕೋದ್ಯಮ ಪ್ರವೇಶಿಸಿದ್ದ ವಿಜಯ ಕೋಟ್ಯಾನ್ ವಿಜಯ ಕರ್ನಾಟಕದಲ್ಲಿ 22 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. 2019-20ನೇ ಸಾಲಿನ ಪ.ಗೋ. ಪ್ರಶಸ್ತಿ, 2022ರಲ್ಲಿ ಕಲಬುರಗಿಯಲ್ಲಿ ನಡೆದ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಡ್ರಗ್ಸ್ ಸಂಬಂಧಿತ ಸ್ಕೂಪ್ ವರದಿಗೆ ಬಿ.ಎಸ್. ವೆಂಕಟರಾಂ ರಾಜ್ಯ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ನೀಡುವ ಪ್ರತಿಷ್ಠಿತ ‘ಅಭಿಮಾನಿ ದತ್ತಿ ಪ್ರಶಸ್ತಿ’ ಲಭಿಸಿದೆ. ನೀರುಮಾರ್ಗ ಪಡು ಬೊಂಡಂತಿಲ ಗ್ರಾಮದ ಗೋಪಾಲ ಪೂಜಾರಿ ಮತ್ತು ಕಮಲ ದಂಪತಿಯ ಪುತ್ರ.


Leave a Reply

Your email address will not be published. Required fields are marked *