TOP STORIES:

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.

 

ಮಂಗಳೂರಿನ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ ಸಿಟಿವಿಎಸ್ ತಂಡ ವಿಶೇಷ ಶಸ್ತ್ರಚಿಕಿತ್ಸೆ ನಡೆಸಿ 12 ವರ್ಷದ ಬಾಲಕನ ಕುತ್ತಿಗೆಯ ಮೂಲಕ ಎದೆಗೂಡಿಗೆ ಸೇರಿದ ತೆಂಗಿನಗರಿ ಹಾಗೂ ಬಾಲಕನ ಕುತ್ತಿಗೆಗೆ ಹಾಕಿಕೊಂಡಿದ್ದ ಚೈನ್ ಹೊರತೆಗೆಯುವ ಮೂಲಕ ಜೀವದಾನ ನೀಡಿರುವ ವೈದ್ಯರ ಸಾಧನೆಯನ್ನು ಗುರುತಿಸಿ ವೈದ್ಯರ ತಂಡವನ್ನು ಸನ್ಮಾನಿಸಿ ಮಾತನಾಡಿದರು.

ವೆನ್ಲಾಕ್ ಆಸ್ಪತ್ರೆಯ ಹೃದ್ರೋಗ ವಿಭಾಗ ಮುಖ್ಯಸ್ಥ ಡಾ.ಸುರೇಶ್ ಪೈ ನೇತೃತ್ವದ ತಂಡ ಅಪೂರ್ವ ಶಸ್ತ್ರಚಿಕಿತ್ಸೆ ಮೂಲಕ ಬಾಲಕನಿಗೆ ಜೀವದಾನ ನೀಡುವ ಮೂಲಕ ದೇಶಕ್ಕೆ ಉತ್ತಮ ಸಂದೇಶ ನೀಡಿದೆ. ಇವರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಸುರೇಶ್ ಪೈ, ವೆನ್ಲಾಕ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಸಿಗುತ್ತಿದೆ. ಇಲ್ಲಿನ ಚಿಕಿತ್ಸೆ ಬಗ್ಗೆ ಯಾವುದೇ ಮುಜುಗರಬೇಡ. ಖಾಸಗಿ ಆಸ್ಪತ್ರೆಗೂ ಮೀರುವಂತಹ ಚಿಕಿತ್ಸೆ ಇಲ್ಲಿ ನೀಡಲಾಗುತ್ತದೆ. ಆದರೆ ಪ್ರಚಾರದಲ್ಲಿ ಹಿಂದೆ ಬಿದ್ದಿದ್ದೇವೆ ಎಂದರು.

 

ಕಾರ್ಡಿಯೋಥೋರಾಸಿಕ್ ಮತ್ತು ವ್ಯಾಸ್ ಕ್ಯುಲರ್ ಸರ್ಜರಿ ವಿಭಾಗದ ಡಾ.ಸುರೇಶ್ ಪೈ, ಡಾ.ಸೂರಜ್ ಪೈ, ನರ್ಸಿಂಗ್ ಅಧಿಕಾರಿ ವಹೀದಾ , ಡಾ.ಪ್ರಣವ್, ಡಾ.ಶುಭಂ ಗುಪ್ತಾ, ಜಿಲ್ಲಾ ವೈದ್ಯಾಧಿಕಾರಿ ಡಾ.ಶಿವಪ್ರಕಾಶ್, ಪ್ರಾದೇಶಿಕ ವೈದ್ಯಕೀಯ ಅಧಿಕಾರಿ ಡಾ.ಸುಧಾಕರ್, ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಪದ್ಮನಾಭ ಅಮೀನ್, ಪ್ರಮೀಳಾ ಈಶ್ವರ್, ಶಶೀಧರ ಕೊಠಾರಿ, ಅನೀಲ್, ನಾಮನಿದೇಶೀತ ಪಾಲಿಕೆ ಸದಸ್ಯ ಸತೀಶ್, ಕೊಂಕಣಿ ಸಾಹಿತ್ಯ ಅಕಾಡೆಮಿ ಸದಸ್ಯ ಸಮರ್ಥ್ ಭಟ್, ಕಾರ್ಮಿಕ ಘಟಕದ ರಾಜ್ಯ ಪ್ರ.ಕಾರ್ಯದರ್ಶಿ ವಹಬ್‌ ಕುದ್ರೋಳಿ, ಸಾಮಾಜಿಕ ಕಾರ್ಯಕರ್ತೆ ಮಂಜುಳಾ ನಾಯಕ್, ಟಿ.ಸಿ ಗಣೇಶ್ , ಕಾರ್ಮಿಕ ಘಟಕದ ಮುಖಂಡರಾದ ಜಯರಾಜ್ ಅಂಚನ್, ಸೀತಾರಾಮ್ ಶೆಟ್ಟಿ , ನನೀತ್ ಶರಣ್ ಮತ್ತಿತರು ಉಪಸ್ತಿತರಿದ್ದರು.

 

ಮಡಿಕೇರಿಯಲ್ಲಿ ಕಾಫಿ ಎಸ್ಟೇಟ್‌ನಲ್ಲಿ ಶನಿವಾರ ಕಮಲ್ ಹುಸೇನ್ (12) ಎಂಬಾತ ಆಟವಾಡುತ್ತಿದ್ದಾಗ ಹತ್ತಿರದಲ್ಲಿದ್ದ ತೆಂಗಿನ ಮರದ ಗರಿ ಬಾಲಕನ ಮೇಲೆ ಬಿದ್ದು ಅವಘಡ ಸಂಭವಿಸಿತ್ತು. ಇದರಿಂದ ತೆಂಗಿನಗರಿಯ (ಅಂದಾಜು 20 ಸೆಂ.ಮೀ. ಉದ್ದ) ಭಾಗ ಬಾಲಕನ ಕುತ್ತಿಗೆಯಲ್ಲಿ ಹಾಕಿಕೊಂಡಿದ್ದ ಸ್ಟೀಲ್ ಚೈನ್‌ನೊಂದಿಗೆ ಎದೆಯೊಳಗೆ ಹೊಕ್ಕಿತ್ತು. ಮಡಿಕೇರಿ ಸರಕಾರಿ ಆಸ್ಪತ್ರೆಯಲ್ಲಿ ಬಾಲಕನಿಗೆ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ರೆಫರ್ ಮಾಡಲಾಗಿತ್ತು. ತಕ್ಷಣವೇ ಮಂಗಳೂರಿನ ವೆನ್ಸಾಕ್ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ ಬಾಲಕನಿಗೆ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ತೆಂಗಿನ ಗರಿಯ ತುಂಡು ಹಾಗೂ ಚೈನ್ ಹೊರತೆಗೆದು ಬಾಲಕನಿಗೆ ಹೊಸ ಬದುಕು ನೀಡಲಾಗಿತ್ತು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »