07/08/2026

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ

0
IMG-20250530-WA0007

ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ.

ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ, ವಿಪರೀತವಾಗಿ ಸುರಿದ ಭಾರಿ ಮಳೆಗೆ ಉಳ್ಳಾಲ ತಾಲೂಕಿನ ಮೊಂಟೆಪದವಿನಲ್ಲಿ ಸೀತಾರಾಮ ಪೂಜಾರಿಯವರ ಮನೆ ಕುಸಿದು ಬಿದ್ದು ಮಣ್ಣಿನಡಿ ಸಿಲುಕಿ ಅವರ ಇಬ್ಬರು ಕಂದಮ್ಮಗಳು, ತಾಯಿ ಮೃತಪಟ್ಟಿದ್ದು, ಸೀತಾರಾಮರವರ ತಂದೆ ಹಾಗು ಪತ್ನಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನು ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ ಹೇಳಿದರು. ಮೃತಪಟ್ಟವರಿಗೆ ಗರಿಷ್ಠ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಗುರುವಾರ ರಾತ್ರಿ, ಮಂಗಳೂರು ಸಮೀಪದ ಮಾಂಟೆಪದವು ಕೋಡಿಯಲ್ಲಿ ಭಾರೀ ಮಳೆಗೆ ಎರಡು ಮನೆಗಳ ಮೇಲೆ ಗುಡ್ಡ ಕುಸಿದು ಮೂವರು ಮೃತಪಟ್ಟಿದ್ದಾರೆ. ಇಬ್ಬರು ಮೊಮ್ಮಕ್ಕಳು ಸೇರಿ ಅಜ್ಜಿ ಮೃತಪಟ್ಟಿದ್ದು, ಐದು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

 


Leave a Reply

Your email address will not be published. Required fields are marked *

You may have missed