08/08/2026

ಬನ್ನಾಡಿ ಗರೋಡಿ ಚಾಂಪ ಪೂಜಾರಿ ಎಂಬ ಹಿರಿಯರೊಬ್ಬರ ಬಗ್ಗೆ -ವಸಂತ್ ಗಿಳಿಯಾರ್

0

ಬನ್ನಾಡಿ ಗರೋಡಿ ಚಾಂಪ ಪೂಜಾರಿ ಎಂಬ ಹಿರಿಯರೊಬ್ಬರ ಬಗ್ಗೆ
-ವಸಂತ್ ಗಿಳಿಯಾರ್

ಇವತ್ತು ಚಾಂಪ ಪೂಜಾರಿಯವರಿಲ್ಲ! ಆದರೆ ಅವರ ಹೆಸರು ಉಳಿದಿದೆ, ಧರ್ಮಸ್ಥಳ ಎಂದರೆ ನಮ್ಮ ಭಾಗದಲ್ಲಿ ಎಂದಿಗೂ ನೆನಪಾಗುವ ಹೆಸರದು. ಧರ್ಮಸ್ಥಳದ ಸತ್ಯ, ಧರ್ಮ,ನ್ಯಾಯ,ನೀತಿ ಎಂಬ ಆಶಯಗಳನ್ನೇ ಬದುಕಿ ತನ್ನ ಬದುಕನ್ನೇ ಸತ್ಯವೃತವಾಗಿಸಿಕೊಂಡು ಕಾಯವನ್ನ ಗಂದದ ಕೊರಡಿನಂತೆ ಸವೆಸಿದ ಕೀರ್ತಿಶೇಷರು ಚಾಂಪ ಪೂಜಾರಿ.

ಆ ಕಾಲದಲ್ಲಿ ಈ ಊರಿನಿಂದ ಧರ್ಮಸ್ಥಳಕ್ಕೆ ಹೋಗಬೇಕಿದ್ದರೆ, ಖಾವಂದರ ನ್ಯಾಯ ಛಾವಡಿಯಲ್ಲಿ ವಾಗ್ ಕಲಹ ಪರಿಹಾರವಾಗಬೇಕಿದ್ದರೆ, ಸಸೂತ್ರವಾಗಿ ಮಂಜುನಾಥ ಸ್ವಾಮಿಯ ದರ್ಶನವಾಗಬೇಕಿದ್ದರೆ, ಯಾವ ದಿನ ಬೇಕಿದ್ದರೂ ಧರ್ಮಸ್ಥಳಕ್ಕೆ ಹೋಗಿ ಸುರಕ್ಷಿತವಾಗಿ ಮರಳ ಬಲ್ಲೆ ಎಂಬ ವಿಶ್ವಾಸ ಆ ಕಾಲದ ಭಕ್ತ ಕುಟುಂಬಗಳಿಗೆ ಬಂದದ್ದಿದ್ದರೆ ಈ ಭಾಗದಲ್ಲಿ ಅದೆಲ್ಲದಕ್ಕೂ ಏಕೈಕ ಹೆಸರು ಬನ್ನಾಡಿ ಚಾಂಪ ಪೂಜಾರಿಯವರದ್ದು.

ಚಾಂಪ ಫುಜಾರಿ ಎಂದರೆ ತೆಂಕಣದ ಧರ್ಮದೊಡೆಯನ ಹೃದಯ ಮಂದಿರದಲ್ಲಿಟ್ಟು ಪೂಜಿಸಿದ ಪುಣ್ಯಾತ್ಮ. ಅವರಿಗೆ ಪೂಜ್ಯ ಖಾವಂದರೆಂದರೆ ರಾಮನ ಮುಂದೆ ಹನುಮ ಭಾಗಿದಂತಹ ನಿಷ್ಠೆ, ಅವರದ್ದು ನಿಷ್ಕಳಂಕ ಮನಸ್ಸು, ಪರಿಶುಭ್ರ ಚಾರಿತ್ರ್ಯ. ಬನ್ನಾಡಿ ಗರೋಡಿಯ ಪೂಜೆಯವರಾಗಿದ್ದ ಚಾಂಪ ಫೂಜಾರಿಯವರ ಪೂಜೆಗೆ, ಯಾವ ದೈವವೂ ನಲಿದು, ಒಲಿದು ಬರಬೇಕು, ಅಂಥಹ ತಾದಾತ್ಮ್ಯತೆ

ಚಾಂಪ ಪೂಜಾರಿ ತನ್ನ ವ್ಯಾನಿನ ಮೂಲಕ ಬನ್ನಾಡಿ, ಗಿಳಿಯಾರು,ಕಾವಡಿ, ವಡ್ಡರ್ಸೆ,ಕೋಟ, ಪಡುಕರೆ,ಉಪ್ಲಾಡಿ ಹೀಗೆ ಪುಟ್ಟ ಪುಟ್ಟ ಊರಿನ ದಾರಿಗಳೂ ಧರ್ಮಸ್ಥಳಕ್ಕೆ ಬೆಸೆಯುವ ಸೇತುವೆಯಾದವರು.ಧರ್ಮಸ್ಥಳದ ಪೂಜ್ಯ ಖಾವಂದರಿಗೆ ಇಂದಿಗೂ ಚಾಂಪ ಪೂಜಾರಿಯವರ ಮೇಲೆ ಅಪಾರ ಪ್ರೀತಿ ನೆನೆಕೆ, ಖಾವಂದರ ಹೃದಯ ಗೆದ್ದವರು ಚಾಂಪ ಪೂಜಾರಿ. ಅವರ ನಗೆಯೇ ಒಂದು ಪ್ರೀತಿಯ ಕಡಲು ಈ ಪೋಟೋದಲ್ಲೆ ನೋಡಿ ಅವರ ಮುಖದಲ್ಲಿನ ತೇಜೋಪೂರ್ಣ ವರ್ಚಸ್ಸು.

ಚಾಂಪ ಪೂಜಾರಿ ಒಂದರ್ಥದಲ್ಲಿ ಅಕ್ಷರವಿಲ್ಲದ, ಜಗದ ಅರಿವಿಲ್ಲದ ಆ ಕಾಲದ ಮುಗ್ದ ಕುಟುಂಬದ ಪಾಲಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಮ್ಮ ಭಾಗದ ದ್ವಾರವೇ ಆಗಿದ್ದರು. ನಾಡಿದ್ದು ಅಭಿಮತ ಸಂಭ್ರಮಕ್ಕೆ ನೀವು ಬರುವುದಾದರೆ ’ಬನ್ನಾಡಿ ಚಾಂಪ ಪೂಜಾರಿ ಮಹಾದ್ವಾರದ ಮೂಲಕವೇ ಬರಬೇಕು. ಹೌದು, ಅಭಿಮತ ಸಂಭ್ರಮದ ಮಹಾದ್ವಾರಕ್ಕೆ ಚಾಂಪ ಪೂಜಾರಿಯವರ ಹೆಸರನ್ನ ಇರಿಸಲಿದ್ದೇವೆ. ಇದು ನಾವು ಅವರನ್ನ ಗೌರವದಿಂದ ನೆನೆಯುವ ಪರಿ. ಬರುತ್ತೀರಿ ತಾನೆ?

ಬನ್ನಿ ಗಿಳಿಯಾರಿಗೆ;ತೀರ ನಿಮ್ಮದೇ ಎನಿಸುವ ಊರಿಗೆ !

ಫೋಟೋ ಕೃಪೆ, ಅವರ ಮೊಮ್ಮಗ ಬಿಗ್ ಬಾಸ್ Dhanraj Cm ❤

Vasanth Giliyar


Leave a Reply

Your email address will not be published. Required fields are marked *

You may have missed